ಅವರು ಇಂದು ಬೆಳಗ್ಗೆ ದೆಹಲಿಯ ಅನೇಕ ಕಡೆ ಎಟಿಎಂಗಳ ಮುಂದೆ ಸಾಲಿನಲ್ಲಿ ನಿಂತಿರುವ ಜನರನ್ನು ಹೋಗಿ ಮಾತನಾಡಿಸಿದರು. ಅವರ ಸಮಸ್ಯೆಗಳನ್ನು ಆಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ದಿಢೀರ್ ನಿರ್ಧಾರದ ಬಳಿಕ ತಾವು ಬಹಳ ತೊಂದರೆಗೆ ಸಿಲುಕಿ ಹಾಕಿಕೊಂಡಿದ್ದೇವೆ ಎಂದು ಜನರು ಹೇಳುತ್ತಿದ್ದಾರೆ. ಬ್ಯಾಂಕು ಮತ್ತು ಎಟಿಎಂ ಹಿಂದುಗಡೆ ಶ್ರೀಮಂತ ಆಯ್ದ ವ್ಯಕ್ತಿಗಳಿಗೆ ಹೊಸ ನೋಟುಗಳನ್ನು ನೀಡುತ್ತಿದ್ದು, ಬಡವರಾದ ನಾವು ಗಂಟೆಗಟ್ಟಲೆ ಹೊರಗೆ ಸಾಲಿನಲ್ಲಿ ನಿಂತುಕೊಳ್ಳಬೇಕಾಗಿದೆ ಎಂದು ಜನರು ಹೇಳುತ್ತಿದ್ದಾರೆ ಎಂದರು. ಜನರ ಸಮಸ್ಯೆಗಳನ್ನು ಕಣ್ಣಾರೆ ನೋಡಲು ಇಲ್ಲಿಗೆ ಬಂದಿರುವುದಾಗಿ ರಾಹುಲ್ ಗಾಂಧಿ ತಿಳಿಸಿದರು.