ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಶಿಕಾಂತ್ ದಾಸ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು(ಡಿಸಿಸಿಬಿ)ಗಳಿಗೆ ಕೇಂದ್ರ ಸರ್ಕಾರ ಸುಮಾರು 21 ಸಾವಿರ ಕೋಟಿ ರುಪಾಯಿಯನ್ನು ಬಿಡುಗಡೆ ಮಾಡಿದೆ. ಭಾರತೀಯ ರಿಸರ್ವ ಬ್ಯಾಂಕ್(ಆರ್ಬಿಐ) ಮತ್ತು ನಬಾರ್ಡ್ ಬ್ಯಾಂಕ್ ಗಳು ಸಹಕಾರಿ ಬ್ಯಾಂಕ್ ಗಳಿಗೆ ನೀಡಿರುವ ನಿರ್ದೇಶನದಂತೆ ಆಯಾ ಸಹಕಾರಿ ಬ್ಯಾಂಕ್ ಗಳು ರೈತರಿಗೆ ಹಣ ಪೂರೈಸುತ್ತವೆ ಎಂದರು.