ನೋಟು ನಿಷೇಧವನ್ನು ವಿರೋಧಿಸಿ ಸಂಸತ್ ಭವನದ ಬಳಿ ಇರುವ ಗಾಂಧಿ ಪ್ರತಿಮೆಯ ಎದುರು ಎಸ್ ಪಿ, ಬಿಎಸ್ ಪಿ, ಟಿಎಂಸಿ, ಡಿಎಂಕೆ, ಸಿಪಿಐ(ಎಂ) ಸಂಸದರು ಪ್ರತಿಭಟನೆ ನಡೆಸುತ್ತಿದ್ದಾರೆ. ನೋಟು ನಿಷೇಧದ ನಿರ್ಧಾರದ ಹಿಂದೆ ದೊಡ್ಡ ಹಗರಣ ನಡೆದಿದೆ. ಈ ಹಗರಣದ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳ ಒಕ್ಕೂಟದ ಸಂಸದರು ಒತ್ತಾಯಿಸಿದ್ದಾರೆ.