ಕನ್ನಯ್ಯ ಕುಮಾರ್ ಸೇರಿದಂತೆ 20 ಜೆಎನ್ ಯು ವಿದ್ಯಾರ್ಥಿಗಳಿಗೆ ಶೋಕಾಸ್ ನೋಟಿಸ್

ದೇಶದ್ರೋಹ ಆರೋಪದ ಮೇಲೆ ಬಂಧನವಾಗಿದ್ದ ಕನ್ನಯ್ಯ ಕುಮಾರ್ ಸೇರಿದಂತೆ 20 ಜೆಎನ್ ಯು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ವಿವಿ ಆಡಳಿತ ಮಂಡಳಿ ...
ಕನ್ನಯ್ಯ ಕುಮಾರ್
ಕನ್ನಯ್ಯ ಕುಮಾರ್

ನವದೆಹಲಿ: ದೇಶದ್ರೋಹ ಆರೋಪದ ಮೇಲೆ ಬಂಧನವಾಗಿದ್ದ ಕನ್ನಯ್ಯ ಕುಮಾರ್ ಸೇರಿದಂತೆ 20 ಜೆಎನ್ ಯು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ವಿವಿ ಆಡಳಿತ ಮಂಡಳಿ ನೋಟಿಸ್ ನೀಡಿದೆ.

ವಿವಿ ಉಪಕುಲಪತಿ ಹಾಗೂ ಇತರೆ ಹಿರಿಯ ಅಧಿಕಾರಿಗಳನ್ನು ಆಡಳಿತ ಕಚೇರಿಯ ಕಟ್ಟಡದಲ್ಲಿ ಅಕ್ರಮವಾಗಿ ಬಂಧನದಲ್ಲಿರಿಸಿದ ಸಂಬಂಧ ವಿವರಣೆ ನೀಡುವಂತೆ  ಜೆಎನ್ ಯು ವಿವಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಕನ್ನಯ್ಯ ಕುಮಾರ್ ಮತ್ತು ಉಮರ್ ಖಾಲಿದ್ ಒಳಗೊಂಡಂತೆ 20 ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ.

ಬಯೋಟೆಕ್ನಾಲಜಿ ವಿದ್ಯಾರ್ಥಿ ನಜೀಬ್ ಅಹಮದ್ ಕಳೆದ ಅಕ್ಟೋಬರ್ 15 ರಿಂದ ನಾಪತ್ತೆಯಾಗಿದ್ದ ಹಿನ್ನಲೆಯಲ್ಲಿ ಕನ್ನಯ್ಯ ನೇತೃತ್ವದಲ್ಲಿ ವಿವಿಯ ಆಡಳಿತ ಕಚೇರಿಯಲ್ಲಿ ಸುಮಾರು 20 ಗಂಟೆಗಳ ಕಾಲ ಉಪಕುಲಪತಿ ಮತ್ತಿತರರನ್ನು ಬಂಧಿಸಿಡಲಾಗಿತ್ತು, ಈ ಸಂಬಂಧ 20 ವಿದ್ಯಾರ್ಥಿಗಳಿಗೂ ವಿವಿ ಆಡಳಿತ ಮಂಡಳಿ ನೋಟಿಸ್ ಜಾರಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com