ಇಬ್ಬರು ನಕ್ಸಲರ ಹತ್ಯೆ ಪ್ರಕರಣ: ಕೇರಳ ಸರ್ಕಾರದಿಂದ ನ್ಯಾಯಾಂಗ ತನಿಖೆ

ಸಿಪಿಐ(ಎಂ) ನೇತೃತ್ವದ ಎಲ್ ಡಿಎಫ್ ಸರ್ಕಾರ ಇತ್ತೀಚೆಗೆ ಕೇರಳದ ನೀಲಂಬುರ್ ಕಾಡಿನಲ್ಲಿ ನಡೆದ ಇಬ್ಬರು ಮಾವೋವಾದಿಗಳ ಹತ್ಯೆ ಪ್ರಕರಣವನ್ನು ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ತಿರುವನಂತಪುರ: ಸಿಪಿಐ(ಎಂ) ನೇತೃತ್ವದ ಎಲ್ ಡಿಎಫ್ ಸರ್ಕಾರ ಇತ್ತೀಚೆಗೆ ಕೇರಳದ ನೀಲಂಬುರ್ ಕಾಡಿನಲ್ಲಿ ನಡೆದ ಇಬ್ಬರು ಮಾವೋವಾದಿಗಳ ಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿದೆ.

ಪ್ರರರಣದ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶಿಸಿದ್ದಾರೆ. ಮಲ್ಲಪ್ಪುರಂ ಜಿಲ್ಲೆಯಲ್ಲಿ ನಡೆದ ಈ ಎನ್ ಕೌಂಟರ್ ಪ್ರಕರಣವನ್ನು ಅಪರಾಧ ವಿಭಾಗಕ್ಕೆ ನೀಡಲಾಗಿತ್ತು. ಆದರೆ ಮಾನವ ಹಕ್ಕುಗಳ ಕಾರ್ಯಕರ್ತರು ನ್ಯಾಯಾಂಗ ತನಿಖೆಗೆ ವಹಿಸುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ತಿಳಿಸಿದೆ.

ನವೆಂಬರ್ 24 ರಂದು ನಕ್ಸಲರಾದ ಕುಪ್ಪುಸ್ವಾಮಿ ದೇವರಾಜು ಮತ್ತು ಅಜಿತಾ ಎಂಬುವರನ್ನು ನಿಲಂಬುರ್ ಅರಣ್ಯ ಪ್ರದೇಶದಲ್ಲಿ ಎನ್ ಕೌಂಟರ್ ನಡೆಸಿ ಹತ್ಯೆ ಮಾಡಲಾಗಿತ್ತು. ಪಶ್ಚಿಮ ಘಾಟ್ ನ ಸುಮಾರು 500 ಎಕರೆ ಪ್ರದೇಶದಲ್ಲಿ ಈ ದಾಳಿ ನಡೆದಿತ್ತು. ಸುಧಾರಿತ ಸ್ಫೋಟಕಗಳು, ಸ್ಫೋಟಕ್ಕೆ ಬಳಸುವ ಹಲವು ವಸ್ತುಗಳು, ಸೋಲಾರ್ ಪ್ಯಾನೆಲ್, ಬ್ಯಾಟರಿ ಚಾರ್ಜರ್, ಪೆನ್ ಡ್ರೈವ್, ಆಧುನಿಕ ಟ್ಯಾಬ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com