ಬಾದಲ್ ಸರ್ಕಾರದ ಸಹಾಯವಿಲ್ಲದೆ ಶಸ್ತ್ರಾಸ್ತ್ರಧಾರಿಗಳು ಒಳನುಗ್ಗಲು ಸಾಧ್ಯವಿಲ್ಲ: ಕ್ಯಾಪ್ಟನ್ ಅಮರಿಂದರ್

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂಬುದಕ್ಕೆ ನಾಬಾ ಜೈಲು ಪ್ರಕರಣ ಉದಾಹರಣೆಯಾಗಿದೆ ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಭಾನುವಾರ...
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಕ್ಯಾಪ್ಟನ್ ಅಮರಿಂದರ್ ಸಿಂಗ್
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಕ್ಯಾಪ್ಟನ್ ಅಮರಿಂದರ್ ಸಿಂಗ್

ಸಂಗ್ರೂರ್: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂಬುದಕ್ಕೆ ನಾಬಾ ಜೈಲು ಪ್ರಕರಣ ಉದಾಹರಣೆಯಾಗಿದೆ ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಅತೀ ಹೆಚ್ಚು ಭದ್ರತೆಯುಳ್ಳ ಜೈಲಿನೊಳಗೆ ಶಸ್ತ್ರಾಸ್ತ್ರಧಾರಿಗಳು ನುಗ್ಗಿ ಉಗ್ರನ್ನು ಬಂಧನ ಮುಕ್ತಗೊಳಿಸಿದ್ದಾರೆ. ಘಟನೆ ನಿಜಕ್ಕೂ ಆಘಾತವನ್ನುಂಟು ಮಾಡಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಈ ಘಟನೆ ಉದಾಹರಣೆಯಾಗಿದೆ. ಎಂದು ಹೇಳಿದ್ದಾರೆ.

ಜೈಲಿನಲ್ಲಿ ಉಗ್ರರನ್ನು ಬಂಧನ ಮುಕ್ತಗೊಳಿಸಿ ಕರೆದುಕೊಂಡು ಹೋಗಿದ್ದಾರೆಂದರೆ ಪಂಜಾಬ್ ನಲ್ಲು ವಿಧ್ವಂಸಕ ಕೃತ್ಯವೆಸಗಲು ಉಗ್ರರು ಸಂಚು ರೂಪಿಸಿರುವುದ್ದಾರೆಂಬುದನ್ನು ಸೂಚಿಸುತ್ತದೆ. ಶಸ್ತ್ರಾಸ್ತ್ರಧಾರಿಗಳು ಭೀತಿಯಿಲ್ಲದೆಯೇ ಜೈಲಿನ ಒಳನುಗ್ಗಿದ್ದಾರೆ. ಉಗ್ರರನ್ನು ಬಂಧನ ಮುಕ್ತಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅವರನ್ನು ಯಾರೂ ತಡೆದಿಲ್ಲ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ, ಘಟನೆಯೊಂದು ಪೂರ್ವ ನಿಯೋಜಿತವಾಗಿದೆ ಎಂಬುದನ್ನು ಸೂಚಿಸುತ್ತದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com