ನೀರಿನ ವಿವಾದ ಬಗ್ಗೆ ನಾವು ಗಮನಹರಿಸುತ್ತೇವೆ, ಆದರೆ ಭಾರತ-ಪಾಕಿಸ್ತಾನಗಳೇ ಆ ವಿವಾದಗಳನ್ನು ಬಗೆಹರಿಸಿಕೊಳ್ಳುತ್ತವೆ ಎಂಬ ವಿಶ್ವಾಸವಿದೆ ಎಂದು ಬಾನ್ ಕಿ-ಮೂನ್ ಅವರ ವಕ್ತಾರ ಸ್ಟೀಫನ್ ಡುಜರ್ರಿಕ್ ಹೇಳಿದ್ದಾರೆ. ಭಾರತ-ಪಾಕ್ ನಡುವೆ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಸಂದರ್ಭದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಹರಿಯುತ್ತಿರುವ ಸಿಂಧೂ ನದಿ ನೀರನ್ನು ನಿಲ್ಲಿಸುವ ಬಗ್ಗೆ ಹೇಳಿಕೆ ನೀಡಿದ್ದರು ಈ ಬೆನ್ನಲ್ಲೇ ವಿಶ್ವಸಂಸ್ಥೆ ಕಾರ್ಯದರ್ಶಿ ಪ್ರತಿಕ್ರಿಯೆ ನೀಡಿದ್ದಾರೆ.