ಬಾಂಗ್ಲಾ ಗೆ ಭೇಟಿ ನೀಡಿದ ಭಾರತದ ಮೊದಲ ರಕ್ಷಣ ಸಚಿವ ಮನೋಹರ್ ಪರಿಕ್ಕರ್

ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಎರಡು ದಿನಗಳ ಬಾಂಗ್ಲಾ ಪ್ರವಾಸ ಕೈಗೊಂಡಿದ್ದು, ಇಂದು ಢಾಕಾ ತಲುಪಿದ್ದಾರೆ.
ಮನೋಹರ್ ಪರಿಕ್ಕರ್
ಮನೋಹರ್ ಪರಿಕ್ಕರ್
Updated on

ನವದೆಹಲಿ: ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಎರಡು ದಿನಗಳ ಬಾಂಗ್ಲಾ ಪ್ರವಾಸ ಕೈಗೊಂಡಿದ್ದು, ಇಂದು ಢಾಕಾ ತಲುಪಿದ್ದಾರೆ.

ಬಾಂಗ್ಲಾದೇಶಕ್ಕೆ ಭೇಟಿ ನೀಡಿದ ಮೊದಲ ರಕ್ಷಣಾ ಸಚಿವ ಎಂಬ ಹೆಗ್ಗಳಿಕೆಗೆ ಪರಿಕ್ಕರ್ ಪಾತ್ರರಾಗಿದ್ದಾರೆ. ಬಾಂಗ್ಲಾದ ಪ್ರಮುಖ ನಾಯಕರನ್ನು ಭೇಟಿ ಮಾಡುವ ಪರಿಕ್ಕರ್ ರಕ್ಷಣೆಗೆ ಸಂಬಧಿಸಿದಂತೆ ಹಲವು ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಮುಂದಿನ ತಿಂಗಳು ಬಾಂಗ್ಲಾ ಪ್ರಧಾನ ಮಂತ್ರಿ ಶೇಕ್ ಹಸೀನಾ ನವದೆಹಲಿಗೆ ಭೇಟಿ ನೀಡಲಿದ್ದಾರೆ. ಇಂದು ಬಾಂಗ್ಲಾ ಅಧ್ಯಕ್ಷ ಅಬ್ದುಲ್ ಹಮೀದ್ ಅವರನ್ನು ಪರಿಕ್ಕರ್ ಭೇಟಿ ಮಾಡಲಿದ್ದಾರೆ.

ನಾಳೆ ಬಾಂಗ್ಲಾದ ಮಿಲಿಟರಿ ಅಕಾಡೆಮಿ ಚಿತ್ತಗಾಂಗ್ ಗೆ ಮನೋಹರ್ ಪರಿಕ್ಕರ್ ಭೇಟಿ ನೀಡಲಿದ್ದಾರೆ.ಭಾರತ-ಬಾಂಗ್ಲಾ ದ್ವಿಪಕ್ಷೀಯ ಒಪ್ಪಂದ, ವೈಮಾನಿಕ ತರಬೇತಿ, ಬಾಂಗ್ಲಾ ರಕ್ಷಣಾ ಪಡೆ, ಮಿಲಿಟರಿ ಹಾರ್ಡ್ ವೇರ್ ಪೂರೈಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com