ಪ್ರಚಾರದಲ್ಲಿ ತೊಡಗಿಕೊಂಡಿರುವ ಸರ್ಕಾರ ರಾಷ್ಟ್ರೀಯ ಭದ್ರತೆಯನ್ನು ಕಡೆಗಣಿಸುತ್ತಿದೆ: ಕಾಂಗ್ರೆಸ್

ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಪ್ರಚಾರದ ಮೇಲೆ ಹೆಚ್ಚಿನ ಗಮನವನ್ನು ಹರಿಸುತ್ತಿದ್ದು, ರಾಷ್ಟ್ರೀಯ ಭದ್ರತೆಯನ್ನು ಕಡೆಗಣಿಸುತ್ತಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ...
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಪ್ರಚಾರದ ಮೇಲೆ ಹೆಚ್ಚಿನ ಗಮನವನ್ನು ಹರಿಸುತ್ತಿದ್ದು, ರಾಷ್ಟ್ರೀಯ ಭದ್ರತೆಯನ್ನು ಕಡೆಗಣಿಸುತ್ತಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.

ನಗ್ರೋಟಾ ಉಗ್ರರ ದಾಳಿ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಗಡಿಯಲ್ಲಿ ಪಾಕಿಸ್ತಾನ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ದಾಳಿಯನ್ನು ನಡೆಸುತ್ತಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಪಾಕಿಸ್ತಾನಕ್ಕೆ ದಿಟ್ಟ ಉತ್ತರವನ್ನು ನೀಡಬೇಕಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಪ್ರಚಾರದ ಮೇಲೆಯೇ ಹೆಚ್ಚಿನ ಗಮನವನ್ನು ಹರಿಸಿದ್ದು, ರಾಷ್ಟ್ರೀಯ ಭದ್ರತೆಯನ್ನು ಕಡೆಗಣಿಸುತ್ತಿದೆ. ಹೀಗಾಗಿ ಈ ರೀತಿಯ ಘಟನೆಗಳು ನಡೆಯುತ್ತಿವೆ. ಸರ್ಕಾರ ಎಚ್ಚರದಿಂದ ಇದ್ದಿದ್ದೇ ಆಗಿದ್ದರೆ ಹಾಗೂ ಯೋಧರಿಗೆ ಮುಕ್ತ ಕೈ ನೀಡಿದ್ದರೆ ಈ ರೀತಿಯ ಘಟನೆಗಳು ನಡೆಯುತ್ತಿರಲಿಲ್ಲ. ಪ್ರಕರಣದ ಸಂಪೂರ್ಣ ಹೊಣೆಯನ್ನು ಸರ್ಕಾರ ಹೊತ್ತುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com