ಕಾಂಗ್ರೆಸ್ ಪಕ್ಷ ಹುತಾತ್ಮ ಯೋಧರ ವಿಷಯದಲ್ಲೂ ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ ಎಂದಿದ್ದಾರೆ, ವೆಂಕಯ್ಯ ನಾಯ್ಡು ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸ್ಪೀಕರ್ ಸುಮಿತ್ರಾ ಮಹಾಜನ್, ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ವಿಷಯ ರಾಜಕೀಯ ವಿಷಯ ಅಲ್ಲ, ಆದರೆ ಕೂಂಬಿಂಗ್ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಸಂಪೂರ್ಣ ವರದಿ ಬರಲಿ, ಹುತಾತ್ಮ ಯೋಧರಿಗೆ ನಾವು ಎಂದಿಗೂ ಗೌರವ ಸಲ್ಲಿಸುತ್ತಾ ಬಂದಿದ್ದೇವೆ ಎಂದು ಹೇಳಿದ್ದಾರೆ. ಸುಮಿತ್ರಾ ಮಹಾಜನ್ ಹೇಳಿಕೆಯನ್ನು ಬೆಂಬಲಿಸಿದ ವೆಂಕಯ್ಯ ನಾಯ್ಡು, ಕೂಂಬಿಂಗ್ ಕಾರ್ಯಾಚರಣೆ ಬಳಿಕ ಸಂಸತ್ ನಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.