ರಾಜ್ ಘಾಟ್'ಗೆ ಭೇಟಿ: ರಾಷ್ಟ್ರಪಿತ ಬಾಪೂಗೆ ನಮನ ಸಲ್ಲಿಸಿದ ಮೋದಿ, ಪ್ರಣಬ್

ರಾಷ್ಟ್ರಪಿತ ಗಾಂಧೀಜಿಯವರ 147ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ರಾಜ್ ಘಾಟ್ ಗೆ ಭೇಟಿ ನೀಡಿದ್ದು, ಬಾಪೂ ಅವರ...
ರಾಜ್ ಘಾಟ್'ಗೆ ಭೇಟಿ: ರಾಷ್ಟ್ರಪಿತ ಗಾಂಧೀಜಿಗೆ ನಮನ ಸಲ್ಲಿಸಿದ ಮೋದಿ, ಪ್ರಣಬ್
ರಾಜ್ ಘಾಟ್'ಗೆ ಭೇಟಿ: ರಾಷ್ಟ್ರಪಿತ ಗಾಂಧೀಜಿಗೆ ನಮನ ಸಲ್ಲಿಸಿದ ಮೋದಿ, ಪ್ರಣಬ್

ನವದೆಹಲಿ: ರಾಷ್ಟ್ರಪಿತ ಗಾಂಧೀಜಿಯವರ 147ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ರಾಜ್ ಘಾಟ್ ಗೆ ಭೇಟಿ ನೀಡಿದ್ದು, ಬಾಪೂ ಅವರ ಸ್ಮಾರಕಕ್ಕೆ  ಪುಷ್ಪನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಮತ್ತು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್,  ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಎಲ್.ಕೆ. ಅಡ್ವಾಣಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಗಾಂಧೀಜಿಯವರ ಸ್ಮಾರಕಕ್ಕೆ ಪುಷ್ಪನಮನವನ್ನು ಸಲ್ಲಿಸಿದರು.

ಇಂದು ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಹುಟ್ಟುಹಬ್ಬವಾಗಿದ್ದು, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕಕ್ಕೂ ಪ್ರಧಾನಿ ಮೋದಿಯವರು ಪುಷ್ಪನಮವನ್ನು ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com