ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಉದ್ವಿಗ್ನ ವಾತಾವರಣ: ಪಂಜಾಬ್'ನಾದ್ಯಂತ ಹೆಚ್ಚಿದ ಭದ್ರತೆ

ಗುರುದಾಸ್ಪುರದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ಪಂಜಾಬ್ ನಾದ್ಯಂತ ಭದ್ರತಾ ಹೆಚ್ಚಿಸುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಪೊಲೀಸರು ಮಂಗಳವಾರ ಕೇಂದ್ರ ಸರ್ಕಾರಕ್ಕೆ...
Published on

ಅಮೃತಸರ: ಗುರುದಾಸ್ಪುರದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ಪಂಜಾಬ್ ನಾದ್ಯಂತ ಭದ್ರತಾ ಹೆಚ್ಚಿಸುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಪೊಲೀಸರು ಮಂಗಳವಾರ ಕೇಂದ್ರ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪಂಜಾಬ್ ನಾದ್ಯಂತ ಭದ್ರತೆಯನ್ನು ಹೆಚ್ಚಿಸಲು ಎಚ್ಚರಿಕೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಗಳ ಕೊರತೆಯಿದೆ. ಹೀಗಾಗಿ ಮತ್ತಷ್ಟು ಭದ್ರತಾ ಸಿಬ್ಬಂದಿಗಳನ್ನು ಕಳುಹಿಸಿಕೊಡುವಂತೆ ಪಂಜಾಬ್ ಪೊಲೀಸರು ಕೇಂದ್ರಕ್ಕೆ ಪತ್ರವನ್ನು ಬರೆದಿದ್ದಾರೆಂದು ತಿಳಿದುಬಂದಿದೆ.

ನಿನ್ನೆಯಷ್ಟೇ ಪಂಜಾಬ್ ನ ಗುರುದಾಸ್ಪುರದ ಚಕ್ರಿ ಪೋಸ್ಟ್ ಬಳಿ ಭಾರೀ ಮಟ್ಟದಲ್ಲಿ ಗುಂಡಿನ ಚಕಮಕಿ ನಡೆದಿತ್ತು. ಈಗಲೂ ಗಡಿಯಲ್ಲಿ ಉದ್ನಿಗ್ನ ವಾತಾವರಣ ಮುಂದುವರೆದಿದ್ದು, ಪಂಜಾಬ್ ನಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com