ಕಂದಕಕ್ಕೆ ಉರುಳಿದ ಬಸ್: 4 ಸಾವು, 51 ಜನರಿಗೆ ಗಾಯ

ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಕಂದಕಕ್ಕೆ ಬಸ್ ವೊಂದು ಉರುಳಿ ಬಿದ್ದಿದ್ದು, ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿ 51 ಜನರಿಗೆ ಗಾಯವಾಗಿರುವ ಘಟನೆ...
ಕಂದಕಕ್ಕೆ ಉರುಳಿದ ಬಸ್: 4 ಸಾವು, 51 ಜನರಿಗೆ ಗಾಯ
ಕಂದಕಕ್ಕೆ ಉರುಳಿದ ಬಸ್: 4 ಸಾವು, 51 ಜನರಿಗೆ ಗಾಯ

ಉಧಂಪುರ: ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಕಂದಕಕ್ಕೆ ಬಸ್ ವೊಂದು ಉರುಳಿ ಬಿದ್ದಿದ್ದು, ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿ 51 ಜನರಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ.

ಉಧಂಪುರದಿಂದ ಘೋರ್ಡಿಗೆ ಹೋಗುತ್ತಿದ್ದ ಖಾಸಗಿ ಬಸ್ ಬರ್ಮೀನ್ ಪ್ರದೇಶದ ಬಳಿ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿದೆ. ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದು, 51 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ ಬಹುತೇಕರು ವಿದ್ಯಾರ್ಥಿಗಳೇ ಆಗಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರಸ್ತುತ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಗೆ ಪ್ರಮುಖ ಕಾರಣ ತಿಳಿದುಬಂದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com