ಕಾಂಗ್ರೆಸ್ ನಾಯಕರಿಗೆ ದೇಶಕ್ಕಿಂತ ರಾಹುಲ್ ಗಾಂಧಿ ಮುಖ್ಯ: ರವಿಶಂಕರ್ ಪ್ರಸಾದ್

ಪಾಕಿಸ್ತಾನ ವಿರುದ್ಧ ನಡೆದ ಸರ್ಜಿಕಲ್ ಸ್ಟ್ರೈಕ್ ಅನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ರಾಹುಲ್ ಗಾಂಧಿಗೆ ನಾಚಿಕೆಯಾಗಬೇಕು ಎಂದು ....
ರವಿ ಶಂಕರ್ ಪ್ರಸಾದ್
ರವಿ ಶಂಕರ್ ಪ್ರಸಾದ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಖೂನ್ ಕಿ ದಲಾಲಿ ಎಂದು ಟೀಕಿಸಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಂತರ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದು ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಪಕ್ಷವಾಗಲಿ ಅಥವಾ ಅದರ ರಾಷ್ಚ್ರೀಯ ಉಪಾಧ್ಯಕ್ಷರಾಗಲಿ ಯಾವುದೇ ಪಾಠ ಕಲಿತಿಲ್ಲ ಎಂದು ಟೀಕಿಸಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಅನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ರಾಹುಲ್ ಗಾಂಧಿಗೆ ನಾಚಿಕೆಯಾಗಬೇಕು ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಸದಾ ಬಾಯಿ ಬಡಿದುಕೊಳ್ಳುವ ಕಪಿಲ್ ಸಿಬಲ್, ದಿಗ್ವಜಯ್ ಸಿಂಗ್ ರಂತ ನಾಯಕರು ಬೇಜವಬ್ರಾರಿಯುತವಾಗಿ ನೀಡುವ ಹೇಳಿಕೆಗಳನ್ನು ಕಾಂಗ್ರೆಸ್ ಯಾವತ್ತೂ ನಿಲ್ಲಿಸೊಲ್ಲ ಎಂದು ಅವರು ಆರೋಪಿಸಿದ್ದಾರೆ.

ಇಂದು ಕೆಲ ಕಾಂಗ್ರೆಸ್ ನಾಯಕರು ದೇಶದ ಹಿತಾಸಕ್ತಿ ಮರೆತು, ತಮ್ಮ ಭಕ್ತಿಯನ್ನು ರಾಹುಲ್ ಗಾಂಧಿಗೆ ತೋರುತ್ತಿದ್ದಾರೆ. ದೇಶಕ್ಕಿಂತ ರಾಹುಲ್ ಗಾಂಧಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ ಎಂದು ಅವರು ಕಿಡಿ ಕಾರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com