ಬಿಎಸ್‌ಪಿ ರ್ಯಾಲಿ ವೇಳೆ ಕಾಲ್ತುಳಿತ: 2 ಸಾವು

ಬಹುಜನ ಸಮಾಜವಾದಿ ಪಾರ್ಟಿ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ನಡೆಸುತ್ತಿದ್ದ ಬೃಹತ್ ಸಮಾವೇಶದಲ್ಲಿ ಕಾಲ್ತುಳಿತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ...
ಬಿಎಸ್ಪಿ ರ್ಯಾಲಿ
ಬಿಎಸ್ಪಿ ರ್ಯಾಲಿ
Updated on
ಲಖನೌ: ಬಹುಜನ ಸಮಾಜವಾದಿ ಪಾರ್ಟಿ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ನಡೆಸುತ್ತಿದ್ದ ಬೃಹತ್ ಸಮಾವೇಶದಲ್ಲಿ ಕಾಲ್ತುಳಿತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. 
ಬಿಎಸ್‌ಪಿ ಸಂಸ್ಥಾಪಕ ಕಾನ್ಶಿರಾಮ್ ಅವರ ಪುಣ್ಯ ತಿಥಿ ಅಂಗವಾಗಿ ಸ್ಮಾರಕ ಸ್ಥಳದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಮುಖ್ಯ ದ್ವಾರದಲ್ಲಿ ನೂಕು ನುಗ್ಗಲು ಸಂಭವಿಸಿದ್ದು ಇಬ್ಬರು ಮೃತಪಟ್ಟಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ. 
ಬೃಹತ್ ರ್ಯಾಲಿ ವೇಳೆ 5 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com