ಜಯಲಲಿತಾ ಸಹಿ ಪೋರ್ಜರಿಯಾಗೋ ಸಾಧ್ಯತೆ: ರಾಜ್ಯಪಾಲರಿಗೆ ಉಚ್ಚಾಟಿತ ಎಐಎಡಿಎಂಕೆ ಎಂಪಿ ಪತ್ರ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಸಿಎಂ ಜಯಲಲಿತಾ ಅವರ ಸಹಿಯನ್ನು ಫೋರ್ಜರಿ ಮಾಡುವ ಸಾಧ್ಯತೆ ಇದೆ ಎಂದು ಎಐಎಡಿಎಂಕೆ ಉಚ್ಚಾಟಿತ...
ಶಸಿಕಲಾ ಪುಷ್ಪ ಅವರು ಬರೆದಿರುವ ಪತ್ರ
ಶಸಿಕಲಾ ಪುಷ್ಪ ಅವರು ಬರೆದಿರುವ ಪತ್ರ
Updated on

ಚೆನ್ನೈ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಸಿಎಂ ಜಯಲಲಿತಾ ಅವರ ಸಹಿಯನ್ನು ಫೋರ್ಜರಿ ಮಾಡುವ ಸಾಧ್ಯತೆ ಇದೆ ಎಂದು ಎಐಎಡಿಎಂಕೆ ಉಚ್ಚಾಟಿತ ರಾಜ್ಯಸಭೆ ಸದಸ್ಯೆ ಶಸಿಕಲಾ ಪುಷ್ಪಾ ರಾಜ್ಯ.ಪಾಲರಿಗೆ ಪತ್ರ ಬರೆದಿದ್ದಾರೆ.

ಜಯ ಅವರ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಪಕ್ಷದ ವರಿಷ್ಠರ ಸಹಿಯನ್ನು ನಕಲಿ ಮಾಡು ಸಾಧ್ಯತೆಯಿದೆ ಎಂದು ಗವರ್ನರ್ ಸಿ. ವಿದ್ಯಾಸಾಗರ್ ಅವರಿಗೆ ಪತ್ರ ಬರೆದಿದ್ದಾರೆ.

ಜಯಲಲಿತಾ ಅವರ ಅನುಪಸ್ಥಿತಿಯಲ್ಲಿ ಪ್ರಧಾನ ಉಪ ಕಾರ್ಯದರ್ಶಿ ರಾಜ್ಯದ ಆಡಳಿತ ಚುಕ್ಕಾಣಿಯನ್ನು ಮುಂದುವರಿಸುವಂತೆ ನಾಮ ನಿರ್ದೇಶನ ಮಾಡಲು ಮುಖ್ಯಮಂತ್ರಿ ಸುತ್ತ ಇರುವ ಕೆಲವು ವ್ಯಕ್ತಿಗಳು ಸಿಎಂ ಅವರ ಸಹಿಯನ್ನು ನಕಲು ಮಾಡುವ ಸಾಧ್ಯತೆ ಇದೆ ಎಂದು ಅವರು ಆರೋಪಿಸಿದ್ದಾರೆ.

ಹೀಗಾಗಿ ಜಯಲಲಿತಾ ಆಸ್ಪತ್ರೆಗೆ ದಾಖಲಾದ ದಿನದಿಂದ ಇಲ್ಲಿಯವರೆಗೆ ಮಾಡಿರುವ ಸಹಿಗಳನ್ನು ಪರಿಶೀಲಿಸಬೇಕು ಎಂದು ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಎಐಎಡಿಎಂಕೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಶಸಿಕಲಾ ಪುಷ್ಪ ಅವರನ್ನು ಆಗಸ್ಟ್ ನಲ್ಲಿ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com