ಸೇನಾ ಶಿಬಿರಗಳ ಮೇಲೆ ದಾಳಿಗೆ ಗಡಿಯಲ್ಲಿ ಕಾಯ್ತಿದ್ದಾರೆ 250ಕ್ಕೂ ಹೆಚ್ಚು ಉಗ್ರರು!

ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಪಾಕ್ ಉಗ್ರರು ಶತಪ್ರಯತ್ನ ನಡೆಸುತ್ತಿದ್ದು...
ಭಯೋತ್ಪಾದಕ
ಭಯೋತ್ಪಾದಕ
ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಪಾಕ್ ಉಗ್ರರು ಶತಪ್ರಯತ್ನ ನಡೆಸುತ್ತಿದ್ದು, ಗಡಿಯಲ್ಲಿ 250ಕ್ಕೂ ಹೆಚ್ಚು ಉಗ್ರರು ಸೇನೆ ಮೇಲೆ ದಾಳಿಗೆ ಸಜ್ಜಾಗಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. 
ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿಯಿಂದ ಎಲ್ಇಟಿ ಉಗ್ರ ಸಂಘಟನೆಗೆ ಹೆಚ್ಚು ಹೊಡೆತ ಬಿದ್ದಿದ್ದು, ಭಾರತದಲ್ಲಿ ಹೆಚ್ಚು ಹಾನಿ ಸಂಭವಿಸುವ ರೀತಿಯಲ್ಲಿ ದಾಳಿ ನಡೆಸಲು ಎಲ್ ಇ ಟಿ ಉಗ್ರ ಸಂಘಟನೆ ಸಂಚು ರೂಪಿಸಿದ್ದು, ಸಂಸತ್ ಭವನ, ದೆಹಲಿ ಸಚಿವಾಲಯಗಳು, ಅಕ್ಷರಧಾಮ ದೇವಾಲಯ ಉಗ್ರರ ಹಿಟ್ ಲಿಸ್ಟ್ ನಲ್ಲಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.
ಪ್ರಮುಖವಾಗಿ ಸೈನಿಕರ ಸೇನಾ ನೆಲೆಗಳು ಉಗ್ರರ ಮುಖ್ಯ ಟಾರ್ಗೇಟ್ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಸೇನಾ ನೆಲೆಗಳ ಮೇಲೆ ದಾಳಿಗಳು ನಡೆಯುತ್ತೀವೆ. ಇನ್ನು ಹಲವು ಗಡಿ ನುಸುಳಿವಿಕೆ ಯತ್ನಗಳು ಸೈನಿಕರು ವಿಫಲಗೊಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com