ರಾಹುಲ್ ಗಾಂಧಿ ದಲ್ಲಾಳಿ ಹೇಳಿಕೆ ವಿರುದ್ಧ ಮನೋಹರ್ ಪರಿಕ್ಕರ್ ವಾಗ್ದಾಳಿ

ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ದಾಳಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂನ್ ಕಿ ದಲಾಲಿ ಎಂದು ಟೀಕಿಸಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ...
ಮನೋಹರ್ ಪರಿಕ್ಕರ್
ಮನೋಹರ್ ಪರಿಕ್ಕರ್
Updated on

ಗೋವಾ: ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ದಾಳಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂನ್ ಕಿ ದಲಾಲಿ ಎಂದು ಟೀಕಿಸಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ಯನ್ನು ತಳ್ಳಿ ಹಾಕಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ಸಬ್ ಮರೀನ್ ಮತ್ತು ಹೆಲಿಕಾಪ್ಟರ್ ಖರೀದಿಸುವ ವೇಳೆ ದಲ್ಲಾಳಿಗಳಿದ್ದರು ಎದು ಪರಿಕ್ಕರ್ ತಿರುಗೇಟು ನೀಡಿದ್ದಾರೆ.

ನಾನು ಸಚಿವನಾಗಿ ಅಧಿಕಾರ ಸ್ವೀಕರಿಸಿ  ಇಲಾಖೆಯ  ಒಳಗೆ ನೋಡಿದಾಗ ನನಗೆ ಸತ್ಯದ ಅರಿವಾಯಿತು. ಸಬ್ ಮರೀನ್ ಡೀಲ್ ಮತ್ತು ಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣದಲ್ಲಿ ದಲ್ಲಾಳಿಗಳು ಇದ್ದುದು ತಿಳಿಯಿತು ಎಂದು ಅವರು ಹೇಳಿದ್ದಾರೆ. ಇದನ್ನೆಲ್ಲಾ ನೋಡಿದ ಮೇಲೆ ನನಗೆ ದಲ್ಲಾಳಿ ಪದದ ಅರ್ಥ ಗೊತ್ತಾಗಿದ್ದು ಎಂದು ಟೀಕಿಸಿದ್ದಾರೆ.

ಸರ್ಜಿಕಲ್ ದಾಳಿಯ ನಂತರ ಬಿಜೆಪಿಯನ್ನು ಎಲ್ಲರೂ ನಿಂದಿಸಿದರು, ದಾಳಿಯ ಲಾಭ ಪಡೆಯಲು ನಾವು ಯತ್ನಿಸುತ್ತಿದ್ದೇವೆ ಎಂದು ಆರೋಪಿಸಿದರು. ಭಾರತೀಯ ಯೋಧರ ತ್ಯಾಗ, ಬಲಿದಾನ ಮಾಡಿ ಯಾವುದೇ ರಾಜಕೀಯ ಲಾಭ ಪಡೆಯುವ ಆಸೆ ನಮಗಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com