ಕಾರ್ಯಕರ್ತನ ಹತ್ಯೆ: ಅ.13 ರಂದು ಕೇರಳ ಬಂದ್ ಗೆ ಕರೆ ನೀಡಿದ ಬಿಜೆಪಿ

ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಗುರುವಾರ (ಅ.13) ರಂದು ಕೇರಳ ಬಂದ್ ಗೆ ಕರೆ ನೀಡಿದೆ.
ಕಾರ್ಯಕರ್ತನ ಹತ್ಯೆ: ಅ.13 ರಂದು ಕೇರಳ ಬಂದ್ ಗೆ ಕರೆ ನೀಡಿದ ಬಿಜೆಪಿ
ಕಾರ್ಯಕರ್ತನ ಹತ್ಯೆ: ಅ.13 ರಂದು ಕೇರಳ ಬಂದ್ ಗೆ ಕರೆ ನೀಡಿದ ಬಿಜೆಪಿ
Updated on

ತಿರುವನಂತಪುರಂ: ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಗುರುವಾರ (ಅ.13) ರಂದು ಕೇರಳ ಬಂದ್ ಗೆ ಕರೆ ನೀಡಿದೆ. ಕೇರಳದ ಬಿಜೆಪಿ ಅಧ್ಯಕ್ಷ ಕೆ. ರಾಜಶೇಖರನ್ ಬಂದ್ ಗೆ ಕರೆ ನೀಡಿದ್ದಾರೆ. ಇದೆ ವೇಳೆ ಸಿಪಿಐ(ಎಂ) ಬಿಜೆಪಿ ಕಾರ್ಯಕರ್ತರ ಸರಣಿ ಹತ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್  ನ ನಾಯಕ ರಮೇಶ್ ಚೆನ್ನಿತಾಲ ಉಭಯ ಪಕ್ಷಗಳಿಗೂ ದ್ವೇಷದ ರಾಜಕೀಯವನ್ನು ಬಿಡುವತೆ ಸಲಹೆ ನೀಡಿದ್ದಾರೆ.
ಕಣ್ಣೂರಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು ಜನರು ಭೀತಿಯಿಂದ ಬದುಕುತ್ತಿದ್ದಾರೆ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ರಮೇಶ್ ಚೆನ್ನಿತಾಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com