ಚಲಿಸುತ್ತಿದ್ದ ಬಸ್ ನಲ್ಲಿ ಶೂಟೌಟ್, ಓರ್ವನ ಸಾವು, ದಾಳಿಕೋರರು ಪರಾರಿ

ಚಲಿಸುತ್ತಿದ್ದ ಬಸ್ ನಲ್ಲಿ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಬ್ಬರು ಗುಂಡು ಹಾರಿಸಿ ಕೊಂದು ಹಾಕಿರುವ ಘಟನೆ ತಮಿಳುನಾಡಿನ ಮದುರೈ ಸಮೀಪ ಬುಧವಾರ ನಡೆದಿದೆ.
ತಮಿಳುನಾಡು ಸರ್ಕಾರಿ ಬಸ್ ನಲ್ಲಿ ಶೂಟ್ ಔಟ್ (ಸಂಗ್ರಹ ಚಿತ್ರ)
ತಮಿಳುನಾಡು ಸರ್ಕಾರಿ ಬಸ್ ನಲ್ಲಿ ಶೂಟ್ ಔಟ್ (ಸಂಗ್ರಹ ಚಿತ್ರ)
Updated on

ಮಧುರೈ: ಚಲಿಸುತ್ತಿದ್ದ ಬಸ್ ನಲ್ಲಿ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಬ್ಬರು ಗುಂಡು ಹಾರಿಸಿ ಕೊಂದು ಹಾಕಿರುವ ಘಟನೆ ತಮಿಳುನಾಡಿನ ಮದುರೈ ಸಮೀಪ ಬುಧವಾರ ನಡೆದಿದೆ.

ಮೂಲಗಳ ಪ್ರಕಾರ ಮಧುರೈನಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಸತ್ತೂರು ಪಟ್ಟಣದ ಬಳಿ ಈ ದಾಳಿ ನಡೆದಿದ್ದು, ತಮಿಳುನಾಡು ಸಾರಿಗೆ ಇಲಾಖೆಗೆ ಸೇರಿದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ  ವ್ಯಕ್ತಿಯ ಮೇಲೆ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗುಂಡು ಹಾರಿಸಿದ ದುಷ್ಕರ್ಮಿಗಳು ಅಲ್ಲಿಂದ  ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ತಮಿಳುನಾಡಿನ ಕೋವಿಲ್ ಪಟ್ಟಿಯ ಕರುಪ್ಪಸಾಮಿ ಎಂದು ಗುರುತಿಸಲಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಮಧುರೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com