ಚೆನ್ನೈ: ಸಾಮಾಜಿಕ ತಾಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅನಾರೋಗ್ಯಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಆರೋಪದ ಮೇಲೆ ಗುರುವಾರ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತೂತಕುಡಿ ಜಿಲ್ಲೆಯ ಟಿ.ತಿರುಮುನಿಸೆಲ್ವಂ(28) ಹಾಗೂ ಚೆನ್ನೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಸ್.ಬಾಲಸುಂದರಂ ಅಕ ಬಾಲು(42) ಎಂದು ಗುರುತಿಸಲಾಗಿದೆ.
ಫೇಸ್ ಬುಕ್ ನಲ್ಲಿ ತಮಿಳುನಾಡು ಮುಖ್ಯಮಂತ್ರಿಯ ಅನಾರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಮತ್ತಿಬ್ಬರನ್ನು ಇಂದು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮುಂಚೆ ಇದೇ ಕಾರಣ ಸಂಬಂಧ ಎಐಎಡಿಎಂ ಐಟಿ ಘಟಕ ನೀಡಿದ್ದ ದೂರಿನ ಆಧಾರದ ಮೇಲೆ ತಮಿಳುನಾಡು ಪೊಲೀಸರು ಕಳೆದ ಸೋಮವಾರ ಇಬ್ಬರನ್ನು ಬಂಧಿಸಿದ್ದರು. ಅಲ್ಲದೆ ಈ ಸಂಬಂಧ ಪೊಲೀಸರು ಇದುವರೆಗೆ ಒಟ್ಟು 55 ಪ್ರಕರಣಗಳನ್ನು ದಾಖಲಿಸಿದ್ದಾರೆ.