ಕಾಶ್ಮೀರದಲ್ಲಿ ಉಗ್ರರ ದಾಳಿ: ನಾಲ್ವರು ಯೋಧರಿಗೆ ಗಾಯ

ಜಮ್ಮು-ಕಾಶ್ಮೀರದ ಶ್ರೀನಗರ ಹೊರವಲಯದ ಝಕುರಾದಲ್ಲಿ ಉಗ್ರಗಾಮಿಗಳು ಏಕಾಏಕಿ ಗುಂಡಿನ ದಾಳಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರ ಹೊರವಲಯದ ಝಕುರಾದಲ್ಲಿ ಉಗ್ರಗಾಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದು ಸಶಸ್ತ್ರ ಸೀಮಾ ಬಲದ ನಾಲ್ವರು ಜವಾನರು  ಗಾಯಗೊಂಡಿದ್ದಾರೆ. 
ಬಂದೂಕುಧಾರಿ ತಪ್ಪಿಸಿಕೊಂಡಿದ್ದು, ಇದೀಗ ಆ ಪ್ರದೇಶವನ್ನು ಸುತ್ತುವರಿಯಲಾಗಿದೆ. ಅರೆ ಸೇನಾಪಡೆಯ ಯೋಧರು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 29ರಂದು ಭಾರತವು ಪಾಕ್ ಆಕ್ರಮಿತ ಗಡಿ ನಿಯಂತ್ರಣ ರೇಖೆ ಬಳಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ ನಂತರ ಪಾಕಿಸ್ತಾನಿ ಭಯೋತ್ಪಾದಕರಿಂದ ಹಲವು ಬಾರಿ ದಾಳಿ ಎದುರಿಸಿದ್ದಾರೆ. ಈ ವಾರದ ಆರಂಭದಲ್ಲಿ ಲಷ್ಕರ್-ಎ-ತೊಯ್ಬಾದ ಉಗ್ರಗಾಮಿಗಳು ಪಾಂಪೊರ್ ನಲ್ಲಿ ಸರ್ಕಾರಿ ಕಟ್ಟಡದ ಮೇಲೆ ದಾಳಿ ನಡೆಸಿ ಅದರ ಇಬ್ಬರು ಸದಸ್ಯರು ಮೃತರಾಗಿದ್ದರು.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com