ಸುಮಾರು 20 ನಿಮಿಷಗಳ ಕಾಲ ನಾಯಕರು ಮಾತುಕತೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸ್ಟಾಲಿನ್, ನಿನ್ನೆ ಡಿಎಂಕೆ ಕೇಂದ್ರ ಕಚೇರಿಯಲ್ಲಿ ರೈತ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ತೆಗೆದುಕೊಂಡ ಮೂರು ನಿರ್ಣಯಗಳನ್ನು ಸಚಿವರಿಗೆ ಹಸ್ತಾಂತರಿಸಿದ್ದೇವೆ. ಕಾವೇರಿ ಜಲ ವಿವಾದ ವಿಚಾರದಲ್ಲಿ ಸರ್ವ ಪಕ್ಷ ಸಭೆ, ವಿಧಾನ ಸಭೆ ವಿಶೇಷ ಅಧಿವೇಶನ ನಡೆಸುವಂತೆ, ತಮಿಳು ನಾಡಿನ ರಾಜಕೀಯ ಪಕ್ಷಗಳ ನಾಯಕರ ನಿಯೋಗ ಮತ್ತು ರೈತ ಪ್ರತಿನಿಧಿಗಳನ್ನು ಪ್ರಧಾನಿಯವರ ಬಳಿಗೆ ಕರೆದೊಯ್ಯುವ ನಿರ್ಣಯ ಕೈಗೊಳ್ಳುವ ಬೇಡಿಕೆಯನ್ನು ಸಚಿವರ ಮುಂದಿಟ್ಟಿದ್ದೇವೆ ಎಂದು ಹೇಳಿದರು.