ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ, 9 ಸಾವು, ಹಲವರಿಗೆ ಗಾಯ

ತಮಿಳು ನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ಮಂದಿ ಮೃತಪಟ್ಟು ಹಲವರು...
ಶಿವಕಾಶಿ ಪಟಾಕಿ ಅಗ್ನಿ ಅನಾಹುತ
ಶಿವಕಾಶಿ ಪಟಾಕಿ ಅಗ್ನಿ ಅನಾಹುತ
Updated on

ಚೆನ್ನೈ: ತಮಿಳು ನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಐದು ಮಹಿಳೆಯರು ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 15 ಕ್ಕೂ ಹೆಚ್ಚು ಮಂದಿಗೆ ತೀವ್ರಗಾಯಗಳಿಗಾಗಿದ್ದು, ಅವರನ್ನೆಲ್ಲಾ ಸ್ಥಲೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಮಧ್ಯಾಹ್ನ ಲಾರಿಯಲ್ಲಿದ್ದ ಪಟಾಕಿಯನ್ನು ಅನ್ ಲೋಡ್ ಮಾಡುವ ವೇಳೆ ಈ ದುರಂತ ಸಂಭವಿಸಿದೆ, ಕ್ಷಣ ಮಾತ್ರದಲ್ಲಿ ಆವರಿಸಿದ ಅಗ್ನಿಯ ಕೆನ್ನಾಲಗೆಗೆ 9 ಮಂದಿ ಬಲಿಯಾಗಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮ ಸಿಬ್ಬಂದಿ ಗಾಯಗೊಂಡವರನ್ನು ರಕ್ಷಿಸಿ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ, ಇಬ್ಬರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವರ್ಷದಲ್ಲಿ ಶಿವಕಾಶಿಯಲ್ಲಿ ನಡೆದ ಬಹುದೊಡ್ಡ ದುರಂತ ಇದಾಗಿದೆ. ಮಾಲೀಕರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com