ಭಾರತೀಯ ಸೇನೆ
ದೇಶ
7 ಪಾಕಿಸ್ತಾನಿ ಸೈನಿಕರನ್ನು ಹತ್ಯೆಗೈದ ಭಾರತೀಯ ಯೋಧರು
ಕದನ ವಿರಾಮ ಉಲ್ಲಂಘಿಸಿ ಗಡಿಯಲ್ಲಿ ಅಪ್ರಚೋದಿತ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಯೋಧರು ಪ್ರತ್ಯುತ್ತರ ನೀಡಿದ್ದು, ಗುಂಡಿನ ದಾಳಿಯಲ್ಲಿ ಏಳು ಪಾಕ್ ...
ಶ್ರೀನಗರ: ಕದನ ವಿರಾಮ ಉಲ್ಲಂಘಿಸಿ ಗಡಿಯಲ್ಲಿ ಅಪ್ರಚೋದಿತ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಯೋಧರು ಪ್ರತ್ಯುತ್ತರ ನೀಡಿದ್ದು, ಗುಂಡಿನ ದಾಳಿಯಲ್ಲಿ ಏಳು ಪಾಕ್ ಸೈನಿಕರು ಹಾಗೂ ಓರ್ವ ಉಗ್ರನನ್ನು ಯೋಧರು ಹತ್ಯೆಗೈದಿದ್ದಾರೆ.
ಹೀರಾನಗರ್ ಸೆಕ್ಟರ್ ನ ಬೊಬಿಯಾ ಪೋಸ್ಟ್ ನಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆದ ಬಳಿಕ ಭಾರತೀಯ ಯೋಧರು ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತಿದ್ದಾರೆ. ಎರಡು ಕಡೆಯಿಂದಲೂ ಕಳೆದ 15 ಗಂಟೆಗಳಿಂದಲೂ ಗುಂಡಿನ ಚಕಮಕಿ ನಡೆಯುತ್ತಿದೆ.
ಸೆಪ್ಟೆಂಬರ್ 18 ರಂದು ಉರಿ ವಾಯು ನೆಲೆ ಮೇಲೆ ಉಗ್ರರ ದಾಳಿ ನಡೆದ ನಂತರ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಾ ಬಂದಿದೆ. ಅಕ್ಟೋಬರ್ 16 ರಂದು ಪಾಕಿಸ್ತಾನದ ಮೇಲೆ ಸೀಮಿತ ದಾಳಿ ನಡೆದ ನಂತರ ಇದುವರೆಗೆ ಪಾಕಿಸ್ತಾನ ಸುಮಾರು 32 ಬಾರಿ ಕದನ ವಿರಾಮ ಉಲ್ಲಂಘಿಸಿದೆ, ಈಗಲೂ ಗಡಿ ನಿಯಂತ್ರಣ ರೇಖೆ ಬಳಿ ಗುಂಡಿನ ಚಕಮಕಿ ಮುಂದುವರಿದಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ