ಎರಡು ದಶಕಗಳ ಹಿಂದಿನ ಹಿಂದುತ್ವ ಕುರಿತು ತೀರ್ಮಾನ ನೀಡುವ ವೇಳೆ ಸುಪ್ರೀಂ ಕೋರ್ಟ್ ಈ ವಿಚಾರವನ್ನು ಕೈಗೆತ್ತಿಕೊಂಡಿದೆ. ಜನರ ಪ್ರಾತಿನಿಧ್ಯ ಕಾಯ್ದೆಯಲ್ಲಿ ರಾಷ್ಟ್ರ ಗುರುತು ಮತ್ತು ರಾಷ್ಟ್ರ ಚಿಹ್ನೆಯ ವ್ಯಾಖ್ಯಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಟಿ.ಎಸ್. ಠಾಕೂರ್ ಅವರನ್ನೊಳಗೊಂಡ ಏಳು ಮಂದಿ ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ ಚುನಾವಣೆಯಲ್ಲಿ ಮತ ಸೆಳೆಯಲು ಹುತಾತ್ಮ ಸೈನಿಕರ ಹೆಸರನ್ನು ಬಳಸಬಾರದು ಎಂದು ಹೇಳಿದೆ.