ಒಡಿಶಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಸಾವಿನ ಸಂಖ್ಯೆ 24ಕ್ಕೆ ಏರಿಕೆ

ಭುವನೇಶ್ವರದ ಎಸ್ ಯುಎಂ ಆಸ್ಪತ್ರೆಯ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ...
ಗಾಯಾಳುವನ್ನು ಮತ್ತೊಂದು ಆಸ್ಪತ್ರೆ ಸಾಗಿಸುತ್ತಿರುವುದು
ಗಾಯಾಳುವನ್ನು ಮತ್ತೊಂದು ಆಸ್ಪತ್ರೆ ಸಾಗಿಸುತ್ತಿರುವುದು
ಭುವನೇಶ್ವರ: ಭುವನೇಶ್ವರದ ಎಸ್ ಯುಎಂ ಆಸ್ಪತ್ರೆಯ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಮೃತರನ್ನು ಭುವನೇಶ್ವರದ ದುಮುದುಮಾದ ಬಿಸ್ವನಾಥ್ ಬೆಹ್ರಾ ಹಾಗೂ ಪುರಿ ಜಿಲ್ಲೆಯ ಬಲಿಪಾಡ್ ನ ರಶ್ಮಿತಾ ಸ್ವೈನ್ ಎಂದು ಗುರುತಿಸಲಾಗಿದೆ.
ಘಟನೆ ಸಂಬಂಧ ನಿನ್ನೆಯಷ್ಟೇ ಆಸ್ಪತ್ರೆಯ ಮಾಲೀಕ ಮನೋಜ್ ನಾಯಕ್ ಅವರನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. ಘಟನೆ ನಂತರ ತಲೆಮರೆಸಿಕೊಂಡಿದ್ದ ಮನೋಜ್ ನಾಯಕ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಖಂದಗಿರಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಆಸ್ಪತ್ರೆಗೆ ಭೇಟಿ ನೀಡಿ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದರು. ಆ ನಂತರ ಪೊಲೀಸರು ಆರೋಪಿಗಳ ಬಂಧನಕ್ಕೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com