ಈ ಸಂಬಂಧ ಮಹಿಳಾ ಅಧಿಕಾರಿ ದೆಹಲಿಯ ಚಾಣುಕ್ಯಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, 2008ರಲ್ಲಿ ತಾನು ಬಿಹಾರದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದಾಗಿನಿಂದಲೂ ಮನೋಜ್ ಕುಮಾರ್ ಎಂಬ ವ್ಯಕ್ತಿ ತನಗೆ ಕಿರುಕುಳ ನೀಡುತ್ತಿದ್ದು, 2014ರಲ್ಲಿ ರವಿಶಂಕರ್ ಕಾರ್ಯದರ್ಶಿಯಾಗಿ ದೆಹಲಿ ಬಂದ ನಂತರ ಆತನ ಕಿರುಕುಳ ಮತ್ತಷ್ಟು ಹೆಚ್ಚಿದೆ ಮತ್ತು ಅಶ್ಲೀಲ ಸಂದೇಶ, ಮೇಲ್, ಬೆದರಿಕೆ ಕರೆಗಳನ್ನು ಮಾಡುತ್ತಿರುವುದಾಗಿ ಆರೋಪಿಸಿದ್ದಾರೆ.