ಆರ್'ಎಸ್ ಪುರ ಸೆಕ್ಟರ್ ಬಳಿ ಪದೇಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್

ಜಮ್ಮುವಿನ ಆರ್'ಎಸ್ ಪುರ ಸೆಕ್ಟರ್ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ ಎಂದು ಭಾರತೀಯ ಸೇನೆ ಶನಿವಾರ ಮಾಹಿತಿ ನೀಡಿದೆ...
ಆರ್'ಎಸ್ ಪುರ ಸೆಕ್ಟರ್ ಬಳಿ ಪದೇಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್
ಆರ್'ಎಸ್ ಪುರ ಸೆಕ್ಟರ್ ಬಳಿ ಪದೇಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್

ಜಮ್ಮು: ಜಮ್ಮುವಿನ ಆರ್'ಎಸ್ ಪುರ ಸೆಕ್ಟರ್ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ ಎಂದು ಭಾರತೀಯ ಸೇನೆ ಶನಿವಾರ ಮಾಹಿತಿ ನೀಡಿದೆ.
 
ಈ ಕುರಿತಂತೆ ಮಾತನಾಡಿರುವ ಜಮ್ಮು ಉಪ ಆಯುಕ್ತ ಸಿಮ್ರಾನ್ದೀಪ್ ಸಿಂಗ್ ಅವರು, ಆರ್ ಎಸ್ ಪುರ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘಿಸುತ್ತಲೇ ಬಂದಿದ್ದು, ನಿನ್ನೆ ರಾತ್ರಿ ಕೂಡ ಭಾರತೀಯ ಸೇನೆ ಮೇಲೆ ಅಪ್ರಚೋದಿತನ ಗುಂಡಿನ ದಾಳಿಯನ್ನು ನಡೆಸಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಮುಂಜಾಗ್ರತಾ ಕ್ರಮವಾಗಿ ಜನರನ್ನು ಮನೆಯ ಹೊರಗೆ ಬರದಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಹೀರಾ ನಗರದಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಭಾರತೀಯ ಸೇನೆ ಓರ್ವ ಉಗ್ರ ಸೇರಿದೆಂತೆ 7 ಮಂದಿ ಪಾಕಿಸ್ತಾನ ಸೈನಿಕರನ್ನು ಹತ್ಯೆ ಮಾಡಿತ್ತು. ಪಾಕಿಸ್ತಾನ ಸೈನಿಕರ ಹತ್ಯೆಯಾದ ಬಳಿಕ ಗಡಿಯಲ್ಲಿ ಪಾಕಿಸ್ತಾನ ಸೇನೆಯ ದಾಳಿ ಹೆಚ್ಚಾಗಿದೆ. ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com