ವಡೊದರ: ವಘೊಡಿಯಾ ತಾಲೂಕಿನ ರುಸ್ತಂಪುರ ಗ್ರಾಮದ ಪಟಾಕಿ ಅಂಗಡಿಯೊಂದರಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿ 8 ಮಂದಿ ಮೃತಪಟ್ಟಿದ್ದಾರೆ ಮತ್ತು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ..ಇಂದು ಸಂಜೆ ಈ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. .ಪಟಾಕಿ ಅಂಗಡಿಗೆ ಹೊಂದಿಕೊಂಡಿದ್ದ ಇತರೆ ಎರಡು ಅಂಗಡಿಗಳು ಸಹ ಬೆಂಕಿಗಾಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos