ಎದೆನೋವಿನಿಂದ ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್ ಆಸ್ಪತ್ರೆಗೆ ದಾಖಲು

ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಎದೆನೋವಿನಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಮ್ಸ್ ವೈದ್ಯರು ರಾಮ್ ...
ರಾಮ್ ಗೋಪಾಲ್ ಯಾದವ್
ರಾಮ್ ಗೋಪಾಲ್ ಯಾದವ್

ನವದೆಹಲಿ: ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಎದೆನೋವಿನಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಮ್ಸ್ ವೈದ್ಯರು ರಾಮ್ ಗೋಪಾಲ್ ಯಾದವ್ ಅವರನ್ನು ವೈದ್ಯಕೀಯ ಚಿಕಿತ್ಸೆಗೊಳಪಡಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.

ಉತ್ತರ ಪ್ರದೇಶದ ಸಮಾಜವಾದಿ ಪಕ್ಷದಲ್ಲಿ ನಡೆಯುತ್ತಿರುವ ಯಾದವೀ ಕಲಹದಲ್ಲಿ ರಾಮ್ ಗೋಪಾಲ್ ಯಾದವ್ ತಮ್ಮ ಸೋದರಳಿಯ ಹಾಗೂ ಸಿಎಂ ಅಖಿಲೇಶ್ ಯಾದವ್ ಪರ ನಿಂತಿದ್ದರು. ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್ ಅಖಿಲೇಶ್ ಆಪ್ತ ರಾಮ್ ಗೋಪಾಲ್ ಯಾದವ್ ಅವರನ್ನು ಶಿವಪಾಲ್ ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ.

ಬಹಳ ಹಿಂದಿನಿಂದಲೂ ಅಮರ್ ಸಿಂಗ್ ಪಕ್ಷದೊಳಗೆ ಸಮಸ್ಯೆ ತಂದು ಇಡುತ್ತಾರೆ. ಎಸ್ಪಿಯ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಅವರನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆಪಾದಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com