ಯೋಧರು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಿರುವುದರಿಂದ ನಾವಿಂದು ದೀಪಾವಳಿ ಆಚರಿಸಲು ಸಾಧ್ಯವಾಗಿದೆ

ಗಡಿಯಲ್ಲಿ ಪಾಕಿಸ್ತಾನ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಯೋಧರು ದಿಟ್ಟ ಉತ್ತರ ನೀಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್...
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

ನವದೆಹಲಿ: ಗಡಿಯಲ್ಲಿ ಪಾಕಿಸ್ತಾನ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಯೋಧರು ದಿಟ್ಟ ಉತ್ತರ ನೀಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಪಾಕಿಸ್ತಾನ ಸೈನಿಕರ ದಾಳಿಗೆ ರಕ್ಷಣಾ ಪಡೆ ತಕ್ಕ ಉತ್ತರ ನೀಡುತ್ತಿದ್ದು ನಾವು ಯಾರಿಗೂ ತಲೆ ಬಾಗುವುದಿಲ್ಲ. ಅಲ್ಲದೆ ಯೋಧರು ಗಡಿಯಲ್ಲಿ ನಿಂತು ದೇಶ ರಕ್ಷಣೆ ಮಾಡುತ್ತಿರುವುದರಿಂದಲೇ ನಾವಿಂದು ದೀಪಾವಳಿ ಆಚರಿಸಲು ಸಾಧ್ಯವಾಗಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಮಾಧ್ಯಮದವರ ಜತೆ ಮಾತನಾಡಿದ ರಾಜನಾಥ್ ಸಿಂಗ್ ಅವರು, ಶತ್ರುಗಳ ಸದೆಬಡಿಯುತ್ತಿರುವ ನಮ್ಮ ದೇಶದ ರಕ್ಷಣಾ ಪಡೆಯ ಮೇಲೆ ನಂಬಿಕೆ ಇದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com