ಬೇಹುಗಾರಿಕೆ ಪ್ರಕರಣ: ಸಮಾಜವಾದಿ ಪಕ್ಷ ನಾಯಕನ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಬೇಹುಗಾರಿಕೆ ಆರೋಪ ಹೊತ್ತು ಬಂಧನಕ್ಕೊಳಗಾಗಿರುವ ಸಮಾಜವಾದಿ ಪಕ್ಷದ ನಾಯಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಭಾನುವಾರ ಆಗ್ರಹಿಸಿದೆ...
ಬಿಜೆಪಿ ನಾಯಕ ಪ್ರೇಮ್ ಶುಕ್ಲಾ
ಬಿಜೆಪಿ ನಾಯಕ ಪ್ರೇಮ್ ಶುಕ್ಲಾ
Updated on

ಮುಂಬೈ: ಬೇಹುಗಾರಿಕೆ ಆರೋಪ ಹೊತ್ತು ಬಂಧನಕ್ಕೊಳಗಾಗಿರುವ ಸಮಾಜವಾದಿ ಪಕ್ಷದ ನಾಯಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಭಾನುವಾರ ಆಗ್ರಹಿಸಿದೆ.

ರಕ್ಷಣಾ ಇಲಾಖೆಯ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಪಾಕಿಸ್ತಾನ ರಾಯಭಾರಿ ಕಚೇರಿಯ ಸಿಬ್ಬಂದಿಗಳನ್ನು ಕೆಲ ದಿನಗಳ ಹಿಂದಷ್ಟೇ ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸಲಾಗಿದ್ದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕೂಡ ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ಮುನಬ್ಬಾರ್ ಆಪ್ತ ಕಾರ್ಯದರ್ಶಿ ಪರ್ಹತ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದರು.
 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಪ್ರೇಮ್ ಶುಕ್ಲಾ ಅವರು, ಪ್ರಮುಖವಾದ ಪಕ್ಷದಲ್ಲಿದ್ದುಕೊಂಡು ದೇಶದ ವಿರುದ್ಧವೇ ಈ ರೀತಿಯ ಕೆಲಸ ಮಾಡಿರುವುದು ನಿಜಕ್ಕೂ ದುರಾದೃಷ್ಟಕರ ಸಂಗತಿ. ಇಂತಹ ನಾಯಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com