ಯೋಧನ ದೇಹ ತುಂಡರಿಸಿದ ಪ್ರಕರಣ: ಪಾಕ್ ಗೆ ಪ್ರತ್ಯುತ್ತರ ನೀಡಲು ಕಾಂಗ್ರೆಸ್ ಆಗ್ರಹ

ಜಮ್ಮು ಕಾಶ್ಮೀರ ಗಡಿಯಲ್ಲಿ ಭಾರತೀಯ ಯೋಧನ ಹತ್ಯೆ ಮಾಡಿ ದೇಹ ತುಂಡರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರಿಗೆ ತಕ್ಕ ಉತ್ತರ ನೀಡುವಂತೆ ಜಮ್ಮು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಜಮ್ಮು: ಜಮ್ಮು ಕಾಶ್ಮೀರ ಗಡಿಯಲ್ಲಿ  ಭಾರತೀಯ ಯೋಧನ ಹತ್ಯೆ ಮಾಡಿ ದೇಹ ತುಂಡರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರಿಗೆ ತಕ್ಕ ಉತ್ತರ ನೀಡುವಂತೆ ಜಮ್ಮು ಕಾಂಗ್ರೆಸ್ ಆಗ್ರಹಿಸಿದೆ.

ಭಾರತೀಯ ಯೋಧ  ಮನ್ ದೀಪ್ ಸಿಂಗ್ ಅವರನ್ನು ಹತ್ಯೆ ಮಾಡಿ, ಅವರ ದೇಹವನ್ನು ತುಂಡರಿಸಿದ್ದರು. ಇಂಥಹ ಕೃತ್ಯಗಳನ್ನು ನಡೆಸುವ ಮೂಲಕ ಪಾಕಿಸ್ತಾನ ಸೇನೆ ಯದ್ಧಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಜಮ್ಮು ಕಾಶ್ಮೀರ ಪ್ರದೇಶ ಕಾಂಗ್ರೆಸ್ ವಕ್ತಾರ ರವೀಂದರ್ ಶರ್ಮಾ ಆರೋಪಿಸಿದ್ದಾರೆ.

ಗಡಿ ಪ್ರದೇಶದ ನಾಗರಿಕರು ಪ್ರತಿದಿನ ನಜೆಯುವ ಗುಂಡಿನ ದಾಳಿಯಿಂದ ಬೇಸತ್ತಿದ್ದಾರೆ. ಹೀಗಾಗಿ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಬೇಕು, ಆ ಮೂಲಕ ಭಾರತದ ವಿರುದ್ಧ ಅನಾವಶ್ಯಕವಾಗಿ ಮಾಡುತ್ತಿರುವ ಯುದ್ಧ ಪ್ರಚೋದನೆಗೆ ತಿಲಾಂಜಲಿ ಹಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com