ಸಾಂಗ್ಲಿ: ದೇಶಕ್ಕಾಗಿ ಗಡಿಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡಿ ಹುತಾತ್ಮರಾದ ಬಿಎಸ್ಎಫ್ ಯೋಧ ನಿತಿನ್ ಸುಭಾಷ್ ಕೋಲಿ ಅವರಿಗೆ ಸೋಮವಾರ ಸಕಲ ಗೌರವಗಳೊಂದಿಗೆ ಭಾವಪೂರ್ಣ ವಿದಾಯವನ್ನು ನೀಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಮಜ್ಲಿ ವಿಭಾಗದಲ್ಲಿ ಶುಕ್ರವಾರ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನೆ ನಡೆಸಿದ ಅಪ್ರಚೋದಿತ ಗುಂಡಿ ದಾಳಿಯಲ್ಲಿ ನಿತಿನ್ ಸುಭಾಷ್ ಕೋಲಿಯವರು ಗಂಭೀರವಾಗಿ ಗಾಯಗೊಂಡಿದ್ದರು. ಸೇನಾ ಆಸ್ಪತ್ರೆಯಲ್ಲಿ ಸುಭಾಷ್ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದರು.
ದೇಶದ ರಕ್ಷಣೆಗಾಗಿ ಹೋರಾಡಿ ಹುತಾತ್ಮರಾದ ಯೋಧ ನಿತಿನ್ ಕೋಲಿ ಅವರಿಗೆ ಸೆಲ್ಯೂಟ್ ಮಾಡುತ್ತಿದ್ದೇನೆ. ಸುಭಾಷ್ ಅವರ ಕುಟುಂಬದೊಂದಿಗೆ ನಾವಿದ್ದೇವೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
28ರ ಹರೆಯದ ಸುಭಾಷ್ ಕೋಲಿ ಯವರು ಸಾಂಗ್ಲಿಯ ದೂದ್ ಗಾಂವ್ ಮೂಲದವರಾಗಿದ್ದಾರೆ. ಸುಭಾಷ್ ಅವರಿಗೆ ವಿವಾಹಿತರಾಗಿದ್ದು, 4 ಮತ್ತು 2 ವರ್ಷದ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Advertisement