ಸಿಮಿ ಉಗ್ರರ ಹತ್ಯೆಯೊಂದು ನಕಲಿ ಎನ್'ಕೌಂಟರ್: ಕಾಂಗ್ರೆಸ್

ಭೋಪಾಲ್ ಕೇಂದ್ರ ಜೈಲಿನಿಂದ ತಪ್ಪಿಸಿಕೊಂಡಿದ್ದ 8 ಸಿಮಿ ಉಗ್ರರನ್ನು ಹತ್ಯೆ ಮಾಡಿರುವುದು ನಕಲಿ ಎನ್'ಕೌಂಟರ್ ಎಂಬಂತಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್ ಸೂಕ್ತ ರೀತಿಯ ಕ್ರಮ ಕೈಗೊಳ್ಳಬೇಕಿದೆ ಎಂದು ಕಾಂಗ್ರೆಸ್ ಮಂಗಳವಾರ ಹೇಳಿದೆ...
ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ
ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ
Updated on

ನವದೆಹಲಿ: ಭೋಪಾಲ್ ಕೇಂದ್ರ ಜೈಲಿನಿಂದ ತಪ್ಪಿಸಿಕೊಂಡಿದ್ದ 8 ಸಿಮಿ ಉಗ್ರರನ್ನು ಹತ್ಯೆ ಮಾಡಿರುವುದು ನಕಲಿ ಎನ್'ಕೌಂಟರ್ ಎಂಬಂತಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್ ಸೂಕ್ತ ರೀತಿಯ ಕ್ರಮ ಕೈಗೊಳ್ಳಬೇಕಿದೆ ಎಂದು ಕಾಂಗ್ರೆಸ್ ಮಂಗಳವಾರ ಹೇಳಿದೆ.  

ಈ ಕುರಿತಂತೆ ಮಾತನಾಡಿರುವ ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಎನ್ ಕೌಂಟರ್ ನಲ್ಲಿ ಹತ್ಯೆಯಾಗಿರುವ ಉಗ್ರರ ಫೋಟೋಗಳನ್ನು ಟಿವಿಗಳಲ್ಲಿ ನೋಡಿದ್ದೇನೆ. ಆದರೆ, ಎನ್ ಕೌಂಟರ್ ನಡೆದಿರುವ ಬಗ್ಗೆ ಸಾಕಷ್ಟು ಸಂಶಯಗಳು ಹುಟ್ಟುತ್ತಿವೆ. ಏಕಸಮಯದಲ್ಲಿ 8 ಮಂದಿ ಉಗ್ರರನ್ನು ಎನ್ ಕೌಂಟರ್ ಮಾಡಿರುವುದು ಅನುಮಾನಕ್ಕೆ ದಾರಿ ಮಾಡಿಕೊಟ್ಟಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ಸೂಕ್ತ ರೀತಿಯ ಕ್ರಮ ಕೈಗೊಂಡು ತನಿಖೆ ನಡೆಸಬೇಕಿದೆ ಎಂದು ಹೇಳಿದ್ದಾರೆ.

ನಿಷೇಧಿತ ಸಿಮಿ ಉಗ್ರ ಸಂಘಟನೆಯ 8 ಉಗ್ರರು ಸೋಮವಾರ ನಸುಕಿನ 2 ರಿಂದ 3 ಗಂಟೆ ವೇಳೆಗೆ ಭದ್ರತಾ ಕಾವಲುಗಾರ ರಮಾಶಂಕರ್‌ ಯಾದವ್‌ ಅವರನ್ನು ಹತ್ಯೆ ಮಾಡಿ, ಜೈಲಿನ  ಗೋಡೆ ಹಾರಿ ಪರಾರಿಯಾಗಿದ್ದರು. ಉಗ್ರರಿಗಾಗಿ ಭೋಪಾಲ್ ಪೊಲೀಸರು ಹಾಗೂ ಯೋಧರು ಜಂಟಿಯಾಗಿ ಕಾರ್ಯಾಚರಣೆಗಿಳಿದಿದ್ದರು. ಇದರಂತೆ 8 ಉಗ್ರರನ್ನು ಎನ್'ಕೌಂಟರ್ ಮೂಲಕ ಹತ್ಯೆ ಮಾಡಿದ್ದರು. ಈ ಎನ್ ಕೌಂಟರ್ ನ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದ್ದು, ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಪ್ರತಿಪಕ್ಷಗಳು ಇದೊಂದು ನಕಲಿ ಎನ್'ಕೌಂಟರ್ ಆಗಿದೆ ಎಂದು ಟೀಕೆಗಳನ್ನು ವ್ಯಕ್ತಪಡಿಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com