ಎರಡನೇ ಮದುವೆಯಾದ ನಂತರ ದಿಗ್ವಿಜಯ್ ಸಿಂಗ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಸುಬ್ರಹ್ಮಣಿಯನ್ ಸ್ವಾಮಿ

ಭೋಪಾಲ್ ನಲ್ಲಿ ನಡೆದಿರುವ ಉಗ್ರರ ಎನ್ ಕೌಂಟರ್ ನ್ನು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ...
ಸುಬ್ರಹ್ಮಣಿಯನ್ ಸ್ವಾಮಿ
ಸುಬ್ರಹ್ಮಣಿಯನ್ ಸ್ವಾಮಿ

ನವದೆಹಲಿ: ಭೋಪಾಲ್ ನಲ್ಲಿ ನಡೆದಿರುವ ಉಗ್ರರ ಎನ್ ಕೌಂಟರ್ ನ್ನು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ಎರಡನೇ ಮದುವೆಯಾದ ಬಳಿಕ ದಿಗ್ವಿಜಯ್ ಸಿಂಗ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ (ಮತಿಭ್ರಮಣೆ) ಎಂದು ಲೇವಡಿ ಮಾಡಿದ್ದಾರೆ.

ಎರಡನೇ ವಿವಾಹವಾದ ಬಳಿಕ ದಿಗ್ವಿಜಯ್ ಸಿಂಗ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ, ಆದ್ದರಿಂದ ಅವರ ಹಾಸ್ಯಾಸ್ಪದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದು ವಿಷಯಗಳನ್ನು ಮತ್ತಷ್ಟು ಉಲ್ಬಣಗೊಳಿಸುತ್ತದೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
 
ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಈ ಹಿಂದೆಯೂ ಸಾಕಷ್ಟು ತಪ್ಪು, ಹಾಸ್ಯಾಸ್ಪದ ಹೇಳಿಕೆಗಳನ್ನು ನೀಡಿದ್ದಾರೆ. ಎರಡನೇ ಮದುವೆಯಾದ ಬಳಿಕ ದಿಗ್ವಿಜಯ್ ಸಿಂಗ್ ಮಾನಸಿಕ ಸ್ಥಿಮಿತ ಕಳೆದುಕೊಂಡಂತಿದೆ ಎಂದು ಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ನಲ್ಲಿ ಸಿಮಿ ಉಗ್ರರು ತಪ್ಪಿಸಿಕೊಂಡಿದ್ದರ ಹಿಂದೆ ಷಡ್ಯಂತ್ರ ಇದೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com