ಶ್ರೀನಿಗರ: ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಸೇನೆ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ವಲಯದ ಗಡಿ ನಿಯಂತ್ರಣ ರೇಖೆಯ ಕಡೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಅಖ್ನೂರ್ ವಲಯದಲ್ಲಿ ಪಾಕಿಸ್ತಾನ ಸೈನಿಕರು ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ ಎಂದು ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿವೆ.
ಪಾಕ್ ಸೇನೆಯ ಅಪ್ರಚೋದಿತ ದಾಳಿಗೆ ಭಾರತೀಯ ಸೈನಿಕರು ತಕ್ಕ ಉತ್ತರ ನೀಡಿದ್ದು, ಉಭಯ ದೇಶಗಳ ಸೈನಿಕರ ನಡುವೆ ಗುಂಡಿನ ಕಾಳಗ ಮುಂದುವರೆದಿದೆ. ಆದರೆ ಯಾವುದೇ ಹಾನಿಯ ಬಗ್ಗೆ ಇದುವರೆಗೂ ಮಾಹಿತಿ ಇಲ್ಲ ಎಂದು ಮೂಲಗಳು ತಿಳಿಸಿವೆ.