ಭದ್ರತಾ ಪಡೆಗಳ ಗುಂಡೇಟಿಗೆ ಬಲಿಯಾದ ವ್ಯಕ್ತಿಯ ಕುಟುಂಬದವರನ್ನು ಭೇಟಿ ಮಾಡಿ ಮಾತನಾಡಿದ ಅವರು, ಮಶೂಕ್ ಅಹ್ಮದ್ ಎಂಬುವವರ ಮನೆಗೆ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಭೇಟಿ ನೀಡಿದ್ದೆ. ಕಾಶ್ಮೀರದಲ್ಲಿ ಇದುವರೆಗೆ ನಡೆದ ಪ್ರತಿಭಟನೆ, ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡದ್ದು ಒಂದು ದೊಡ್ಡ ದುರಂತ. ಇಂದು ಕಾಶ್ಮೀರದ ಪ್ರತಿಯೊಬ್ಬರಿಗೂ ಶಾಂತಿ ಬೇಕಾಗಿದೆ ಎಂದು ಮೆಹಬೂಬ ಮುಫ್ತಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.