ಪ್ರತ್ಯೇಕವಾದಿಗಳು ಸರ್ವಪಕ್ಷ ನಿಯೋಗದೊಂದಿಗೆ ಮಾತುಕತೆ ನಿರಾಕರಿಸಿದ ನಂತರ ನಾಲ್ವರು ಸಂಸದರಾದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚುರಿ, ಸಿಪಿಐ ನಾಯಕ ಡಿ ರಾಜಾ, ಜೆಡಿಯು ನಾಯಕ ಶರದ್ ಯಾದವ್ ಹಾಗೂ ಆರ್ ಜೆಡಿಯ ಜಯಪ್ರಕಾಶ್ ನಾರಾಯಣ್ ಅವರು ಪ್ರತ್ಯೇಕವಾಗಿ ಗೀಲಾನಿಯನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು. ಆದರೆ ಕಳೆದ 60 ದಿನಗಳಿಂದ ಗೃಹ ಬಂಧನದಲ್ಲಿರುವ ಗಿಲಾನಿ ಪ್ರತಿಪಕ್ಷ ಸಂಸದರನ್ನು ಭೇಟಿ ಮಾಡಲು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.