ಹೇಳಿಕೆಯಲ್ಲಿ ಮೆಹಬೂಬಾ ಮುಫ್ತಿ ಅವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತ್ಯೇಕತಾವಾದಿಗಳು, ಮೆಹಬೂಬಾ ಮುಫ್ತಿ ಅವರು ಪ್ರತ್ಯೇಕತಾವಾದಿಗಳನ್ನು ಮಾತುಕತೆಗೆ ಆಹ್ವಾನಿಸಿರುವುದು ಕೇವಲ ಪಿಡಿಪಿ ನಾಯಕಿಯಾಗಿಯಷ್ಟೇ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಲ್ಲ ಎಂದು ಹೇಳಿದ್ದಾರೆ. ಉದ್ವಿಗ್ನ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗಾಗಿ ರಾಜನಾಥ್ ಸಿಂಗ್ ನೇತೃತ್ವದ ಸರ್ವಪಕ್ಷ ನಿಯೋಗ ಕಾಶ್ಮೀರದ ಸ್ಥಳೀಯ ನಾಯಕರೊಂದಿಗೆ ಚರ್ಚೆ ನಡೆಸಲು ಕಾಶ್ಮೀರಕ್ಕೆ ತೆರಳಿದ್ದು, ಪ್ರತ್ಯೇಕತಾವಾದಿಗಳನ್ನೂ ಒಳಗೊಂಡ ಮಾತುಕತೆ ನಡೆಸಬೇಕೆಂದು ಮೆಹಬೂಬಾ ಮುಫ್ತಿ ಹೇಳಿದ್ದರು.