ನವದೆಹಲಿ: ದೇಶದಾದ್ಯಂತ ಗೌರಿ, ಗಣೇಶ ಹಬ್ಬವನ್ನು ಸಂಭ್ರದಿಂದ ಆಚರಿಸಲಾಗುತ್ತಿದ್ದು, ಸೋಮವಾರ ಬೆಳಿಗ್ಗೆಯಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ.
ಇಂದು ಬೆಳಿಗ್ಗೆಯಿಂದಲೇ ದೇವಾಲಯಗಳಲ್ಲಿ ಸಾಲುಗಟ್ಟಿ ನಿಂತಿರುವ ಭಕ್ತರು ದೇವರ ದರ್ಶನವನ್ನು ಪಡೆಯುತ್ತಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇಗುಲದಲ್ಲೂ ವಿಶೇಷ ಪೂಜೆ ನಡೆಸಲಾಗುತ್ತಿದ್ದು, ದೇಗುಲಕ್ಕೆ ಭೇಟಿ ನೀಡುತ್ತಿರುವ ಭಕ್ತರ ಸಮಯ ಕಳೆಯುತ್ತಿದ್ದಂತೆ ಸಂಖ್ಯೆ ಹೆಚ್ಚಾಗುತ್ತಲಿದೆ.
ಮುಂಬೈ ಹಾಗೂ ಕೋಲ್ಕತಾದಲ್ಲೂ ಗಣೇಶ ಹಬ್ಬದ ಸಂಭ್ರಮದ ಕಳೆಗಟ್ಟಿದ್ದು, ಎಲ್ಲೆಡೆ ಗಣೇಶನ ಜೈಕಾರಗಳು ಕೂಗು ಕೇಳಿಬರುತ್ತಿದೆ.
Advertisement