ಸುಷ್ಮಾ ಸ್ವರಾಜ್ ಇಟಾಲಿ ಭೇಟಿಯಲ್ಲಿ ನಾವಿಕರ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿಲ್ಲ: ವಿದೇಶಾಂಗ ಇಲಾಖೆ

ಭಾರತೀಯ ಮೀನುಗಾರರಿಬ್ಬರನ್ನು ಹತ್ಯೆಗೈದ ಇಟಲಿ ನಾವಿಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಲಾಗಿಲ್ಲ ಎಂದು ತಿಳಿದುಬಂದಿದೆ.
ಸುಷ್ಮಾ ಸ್ವರಾಜ್
ಸುಷ್ಮಾ ಸ್ವರಾಜ್

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಇಟಾಲಿ ಭೇಟಿಯಲ್ಲಿ ಭಾರತೀಯ ಮೀನುಗಾರರಿಬ್ಬರನ್ನು ಹತ್ಯೆಗೈದ ಇಟಲಿ ನಾವಿಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಲಾಗಿಲ್ಲ ಎಂದು ತಿಳಿದುಬಂದಿದೆ.

ಕಳೆದ ವಾರ ಸುಷ್ಮಾ ಸ್ವರಾಜ್ ರೋಮ್ ಗೆ ಭೇಟಿ ನೀಡಿದ್ದ ವೇಳೆಯಲ್ಲಿ, ಯಾವುದೇ ಪ್ರಶ್ನೆಗಳನ್ನು ಕೇಳಲಾಗಿಲ್ಲ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ. ಭಾರತೀಯ ಮೀನುಗಾರರಿಬ್ಬರ ಹತ್ಯೆ ಪ್ರಕರಣದ ಬಳಿಕ ಕಳೆದ ಕೆಲವು ವರ್ಷಗಳಿಂದ ಇಟಾಲಿ- ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದೆ.

ಭಾರತೀಯ ಮೀನುಗಾರರನ್ನು ಹತ್ಯೆ ಮಾಡಿರುವ ಆರೋಪ ಎದುರಿಸುತ್ತಿರುವ ಇಟಾಲಿ ಮೀನುಗಾರರು ಸುಪ್ರೀಂ ಕೋರ್ಟ್ ನಿಂದ ಅನುಮತಿ ಪಡೆದು ಇಟಾಲಿಯಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com