ಹೊತ್ತಿ ಉರಿಯುತ್ತಿರುವ ಬೆಂಗಳೂರು: ರಾಜ್ಯದ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ತಮಿಳು ನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಆರಂಭಿಸಿದ್ದ ಪ್ರತಿಭಟನೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ತಮಿಳು ನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಆರಂಭಿಸಿದ್ದ ಪ್ರತಿಭಟನೆ ನಿನ್ನೆ(ಸೋಮವಾರ) ಹಿಂಸಾರೂಪಕ್ಕೆ ತಿರುಗಿತು. ಸುಪ್ರೀಂ ಕೋರ್ಟ್ ನ ಮಾರ್ಪಾಡು ಆದೇಶ ನಿನ್ನೆ ಹೊರಬಿದ್ದ ಮೇಲಂತೂ ಅದು ಇನ್ನೂ ಹೆಚ್ಚಾಯಿತು. 
ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಕರ್ನಾಟಕ ಮತ್ತು ತಮಿಳು ನಾಡು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ.
ವಿಶೇಷ ಅರೆಸೈನಿಕ ಪಡೆಯ ಸಾವಿರ ಸಿಬ್ಬಂದಿಯನ್ನು ಪರಿಸ್ಥಿತಿ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಳುಹಿಸಿದೆ. ಕರ್ನಾಟಕದ ಗಲಭೆಪೀಡಿತ ಪ್ರದೇಶಗಳಿಗೆ ಸಿಬ್ಬಂದಿಯನ್ನು ಕಳುಹಿಸಲಾಗಿದ್ದು, ಅಗತ್ಯಬಿದ್ದರೆ ತಮಿಳು ನಾಡಿಗೂ ಕೂಡ ಕೇಂದ್ರ ಮೀಸಲು ಪೊಲೀಸ್ ಪಡೆಯ ಪುರುಷ ಮತ್ತು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ. 
ಗಡಿ ಭದ್ರತಾ ಪಡೆಯ 5-10 ತುಕಡಿಗಳನ್ನು ಮತ್ತು ಭಾರತ-ಟಿಬೆಟನ್ ಗಡಿ ಪೊಲೀಸರನ್ನು ಹೆಚ್ಚುವರಿಯಾಗಿ ಇರಿಸಲಾಗಿದ್ದು, ಅಗತ್ಯಬಿದ್ದರೆ ಕಳುಹಿಸಿಕೊಡಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com