
ಚೆನ್ನೈ: ತಮಿಳುನಾಡಿನಲ್ಲಿ ಕಾವೇರಿ ಹೋರಾಟ ಗಂಭೀರ ಸ್ವರೂಪ ಪಡೆದುಕೊಂಡಿದೆ. 21 ನಾಮ್ ತಮಿಳರ್ ಕಟ್ಚಿ ವಿದ್ಯಾರ್ಥಿ ಸಂಘಟನೆಯ ವರ್ಷದ ಯುವಕ ಸ್ವತಃ ತಾನೇ ಬೆಂಕಿ ಹಚ್ಚಿಕೊಂಡಿದ್ದಾನೆ.
ಪ್ರತಿಭಟನಾ ಸ್ಥಳದಿಂದ ರಸ್ತೆಯ ಮದ್ಯೆ ಓಡಿ ಹೋದ ಪಿ. ವಿಘ್ನೇಶ್ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಶೇ. 90 ರಷ್ಟು ಸುಟ್ಟ ಗಾಯಗಳಿಂದ ನರಳುತ್ತಿರುವ ವಿಘ್ನೇಶ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆತನ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಆರ್ ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ತಮಿಳುನಾಡಿನಲ್ಲಿ ಕರ್ನಾಟಕ ನೋಂದಣಿಯ 2 ಕಾರುಗಳ ಮೇಲೆ ದಾಳಿ ಮಾಡಲಾಗಿದೆ. ದಾಳಿ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕುಮಾರ್ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರು ದಾಖಲಾಗಿದೆ.
Advertisement