ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ: ರಷ್ಯಾ-ಅಮೆರಿಕ ಪ್ರವಾಸವನ್ನು ಮುಂದೂಡಿದ ರಾಜನಾಥ್ ಸಿಂಗ್

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಈ ಹಿಂದೆ ನಿಗದಿಯಾಗಿದ್ದ ರಷ್ಯಾ- ಅಮೆರಿಕ ಪ್ರವಾಸವನ್ನು ಮುಂದೂಡಿದ್ದು ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಲಿದ್ದಾರೆ.
ಗೃಹ ಸಚಿವ ರಾಜನಾಥ್ ಸಿಂಗ್
ಗೃಹ ಸಚಿವ ರಾಜನಾಥ್ ಸಿಂಗ್
Updated on

ನವದೆಹಲಿ: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಯೋತ್ಪಾದಕರ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಈ ಹಿಂದೆ ನಿಗದಿಯಾಗಿದ್ದ ರಷ್ಯಾ- ಅಮೆರಿಕ ಪ್ರವಾಸವನ್ನು ಮುಂದೂಡಿದ್ದು ಗೃಹ ಇಲಾಖೆ, ರಕ್ಷಣಾ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಲಿದ್ದಾರೆ.

ಸೆ.18 ರ ಬೆಳಿಗ್ಗೆ 5:30 ರ ವೇಳೆಗೆ ಕಣಿವೆ ರಾಜ್ಯದ ಬಾರಾಮುಲ್ಲಾದಲ್ಲಿರುವ ಉರಿ ಸೆಕ್ಟರ್ ಪ್ರದೇಶದಲ್ಲಿರುವ ಸೇನಾ ಪ್ರಧಾನ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಗೃಹ ಸಚಿವ ರಾಜನಾಥ್ ಸಿಂಗ್ ಸೆ. 18 ರಿಂದ ನಿಗದಿಯಾಗಿದ್ದ ರಷ್ಯಾ- ಅಮೆರಿಕ ಪ್ರವಾಸವನ್ನು ಮುಂದೂಡಿದ್ದಾರೆ.

ರಷ್ಯಾ- ಅಮೆರಿಕ ಪ್ರವಾಸದ ವೇಳೆ ರಾಜನಾಥ್ ಸಿಂಗ್ ಉಭಯ ರಾಷ್ಟ್ರಗಳ ಗೃಹ ಸಚಿವರೊಂದಿಗೆ ಪಾಕಿಸ್ತಾನ ಭಾರತದ ಗಡಿ ಪ್ರದೇಶದಲ್ಲಿ ನಡೆಸುತ್ತಿರುವ ಭಯೋತ್ಪಾದನೆಯ ವಿಷಯವನ್ನು ಪ್ರಮುಖವಾಗಿ ಚರ್ಚಿಸಲಿದ್ದರು. ಆದರೆ ರಾಜನಾಥ್ ಸಿಂಗ್ ರಷ್ಯಾಗೆ ತೆರಳಬೇಕಿದ್ದ ದಿನದಂದೇ ಜಮ್ಮು-ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು 7 ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ. ಇನ್ನು ಗೃಹ ಸಚಿವರ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸಹ ಭಾಗಿಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com