ರಾಯಗಢ: ಮತ್ತೊಂದು ಆಘಾತಕಾರಿ ಘಟನೆಯೊಂದರಲ್ಲಿ, 102 ಆಂಬ್ಯುಲೆನ್ಸ್ ಪಡೆಯಲು ಮಂಚದಲ್ಲಿ ಹೊತ್ತುಕೊಂಡು ಹೋಗುತ್ತಿರುವಾಗ ಮಹಿಳೆಯೂ ತೀರಿಹೋದ ಘಟನೆ ರಾಯಗಢ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದು, ರಾಜ್ಯದಲ್ಲಿ ಜನರಿಗೆ ಸರಿಯಾದ ಆರೋಗ್ಯ ಸೇವೆ ಸಿಗುವಲ್ಲಿನ ನ್ಯೂನತೆಯನ್ನು ಇದು ಎತ್ತಿ ತೋರಿಸುತ್ತದೆ.