ಲೆಪ್ಟಿನೆಂಟ್ ಗವರ್ನರ್ ಕಚೇರಿ ಹೊರಗೆ ಸಿಸೋಡಿಯಾ ಮೇಲೆ ಇಂಕ್ ದಾಳಿ

ಲೆಫ್ಟಿನೆಂಟ್ ಗವರ್ನರ್ ಕಚೇರಿ ಹೊರಗೆ ವ್ಯಕ್ತಿಯೊಬ್ಬ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಇಂಕ್ ಎರಚಿದ್ದಾನೆ...
ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ
Updated on

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ಕಚೇರಿ ಹೊರಗೆ ವ್ಯಕ್ತಿಯೊಬ್ಬ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಇಂಕ್ ಎರಚಿದ್ದಾನೆ.

ಫಿನ್ ಲ್ಯಾಂಡ್ ಪ್ರವಾಸದಿಂದ ವಾಪಸ್ ಆಗಿರುವ ಮನೀಶ್ ಸಿಸೋಡಿಯಾ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿ ಮಾಡಿದ ನಂತರ, ಗವರ್ನರ್  ಮನೆಯ ಮುಂಭಾಗ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿ ಸಿಸೊಡಿಯಾ ಮೇಲೆ ಇಂಕ್ ಎರಚಿದ್ದಾನೆ.

ಇಂಕ್ ಎರಚಿದ ವ್ಯಕ್ತಿಯನ್ನು ದೆಹಲಿಯ ಕಾರವಾಲ್ ನಗರದ ನಿವಾಸಿ ಬ್ರಿಜೇಶ್ ಶುಕ್ಲಾ ಎಂದು ಸಿಸೋಡಿಯಾ ತಿಳಿಸಿದ್ದಾರೆ.

ದೆಹಲಿಯಲ್ಲಿ  ಚಿಕನ್ ಗುನ್ಯ ಹಾಗೂ ಡೆಂಗ್ಯೂ ತಾಂಡವವಾಡುತ್ತಿದ್ದರೂ ಆಪ್  ಸಚಿವರು ವಿದೇಶ ಪ್ರವಾಸಕ್ಕೆ ತೆರಳಿದ್ದ ಹಿನ್ನೆಲೆಯಲ್ಲಿ ಕೋಪಗೊಂಡ ವ್ಯಕ್ತಿ ಹೀಗೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com