ಅಲ್ಲದೆ ಆರ್ಥಿಕವಾಗಿ ಹಿಂದುಳಿದಿರುವ ಸಾಮಾನ್ಯ ವರ್ಗದವರಿಗೆ ಮೀಸಲಾತಿ ಸೌಲಭ್ಯವನ್ನು ಶೇಕಡಾ 50ರಿಂದ ಶೇಕಡಾ 75ಕ್ಕೆ ಏರಿಸಬೇಕು ಎಂದು ಕೂಡ ಅವರು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ತಾವು ಭೇಟಿ ಮಾಡಿ ಪ್ರಸ್ತಾಪ ಮುಂದಿಡಲಿದ್ದು, ಹೆಚ್ಚುವರಿ ಕೋಟಾಗೆ ಸಾಂವಿಧಾನಿಕ ತಿದ್ದುಪಡಿ ಸಾಧ್ಯವೇ ಎಂದು ನೋಡಬೇಕೆಂದು ಅವರು ಹೇಳಿದ್ದಾರೆ.