ಸುಬ್ರತೋ ರಾಯ್ ಪರ ವಾದ ಮಂಡಿಸಿದ ವಕೀಲ ರಾಜೀವ್ ಧವನ್ ಅವರು, ಸುಬ್ರತೋ ರಾಯ್ ಅವರು ಆಸ್ತಿ ಮಾರಾಟ ಮಾಡಿ ಷೇರುದಾರರಿಗೆ ಹಣ ನೀಡಲು ಸೆಬಿಯ ನೀತಿಗಳು ಅಡ್ಡಿಯಾಗಿವೆ. ಷೇರುದಾರರಿಗೆ ಹಣ ನೀಡುವ ಪ್ರಕ್ರಿಯೆಗಾಗಿ ಅವರ ಉಪಸ್ಥಿತಿ ಅನಿವಾರ್ಯವಾಗಿದೆ. ಹೀಗಾಗಿ ಅವರ ಪೆರೋಲ್ ಅವಧಿಯನ್ನು ವಿಸ್ತರಿಸಬೇಕು ಎಂದು ವಾದ ಮಂಡಿಸಿದರು.